Categories: featureNewsPolitics

ತುರ್ತು ಪತ್ರಿಕಾ ಪ್ರಕಟಣೆ

(20/07/2025)

ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ

ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ ಹಾಗೂ ಕೊಲೆ ಶಂಕಿತ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸುವಂತಿದೆ. ಈ ಪ್ರಕರಣಗಳ ಸತ್ಯ ಹೊರಹಾಕಿ, ನಿಜಕ್ಕೂ ನ್ಯಾಯ ದೊರೆಯುವಂತೆ ಮಾಡಲು ಎಸ್‌ಡಿಪಿಐ (SDPI) ಪಕ್ಷ ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಹೋರಾಟ ನಡೆಸುತ್ತಿದೆ.

ಈ ಹೋರಾಟದ ಅಭಿಯಾನದ ಅಂಗವಾಗಿ ಇಂದು ಸಂಜೆ #ShameOnKarnatakaGovernment w ‘X’ ( ಟ್ವಿಟ್ಟರ್) ನಲ್ಲಿ ಅಭಿಯಾನ ನಡೆಸುತ್ತಿದೆ.

ರಾಜ್ಯ ಸರಕಾರ ಇಂದು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಎಸ್‌ಡಿಪಿಐ ಸ್ವಾಗತಿಸುತ್ತದೆ. ಸರಕಾರದ ಈ ಕ್ರಮವು ಸಾರ್ವಜನಿಕ ಒತ್ತಡಕ್ಕೆ ಸಿಕ್ಕ ಸ್ಪಂದನೆಯಾಗಿದೆ.

ಇದೇ ಸಮಯದಲ್ಲಿ, ಇಂದಿನ (20/07/2025) ಸಂಜೆ 4 ಗಂಟೆಗೆ ಯೋಜಿಸಲಾಗಿದ್ದ ಟ್ವಿಟ್ಟರ್ ಅಭಿಯಾನವನ್ನು ಪಕ್ಷ ತಾತ್ಕಾಲಿಕವಾಗಿ ಮುಂದೂಡಿದೆ. ಆದರೆ, ಸರ್ಕಾರ ರಚಿಸಿರುವ SIT ಗೆ ನಿಜವಾದ ನೈತಿಕ ಮತ್ತು ಕಾನೂನಾತ್ಮಕ ಬಲ ಸಿಗಬೇಕಾದರೆ, ತನಿಖೆಯ ನೇತೃತ್ವವನ್ನು ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗೆ ನೀಡಬೇಕು ಎಂಬುದು ಎಸ್‌ಡಿಪಿಐ ಪಕ್ಷದ ಬಲವಾದ ಬೇಡಿಕೆಯಾಗಿದೆ.

ನಿಷ್ಪಕ್ಷಪಾತ ತನಿಖೆ, ಸೌಜನ್ಯ ಸೇರಿದಂತೆ ನೂರಾರು ಪೀಡಿತ ಹೆಣ್ಣುಮಕ್ಕಳಿಗೆ ನ್ಯಾಯ ನೀಡುವ ದೃಢ ಸಂಕಲ್ಪದೊಂದಿಗೆ, ಎಸ್‌ಡಿಪಿಐ ತನ್ನ ಹೋರಾಟವನ್ನು ಮುಂದುವರಿಸುತ್ತದೆ.

admin

Recent Posts

Condolence

The passing away of Ameer-e-Shariat of Karnataka, the respected religious and social leader Maulana Sageer…

7 hours ago

انتقال پر ملال

امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…

7 hours ago

Condolence

Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…

7 hours ago

ಚಿಕ್ಕಮಗಳೂರು | ಜನವಿರೋಧಿ ಆಡಳಿತ, ಸಂವಿಧಾನ ಮೌಲ್ಯಗಳ ಕುಸಿತ; SDPI ಅಪ್ಸರ್ ಕೊಡ್ಲಿಪೇಟೆ

ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು. ಬೆಂಗಳೂರು…

6 days ago