Categories: featureNewsPolitics

ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು ವಿಚಾರ ಸಂಕಿರಣ ಎಸ್‌ಡಿಪಿಐ ಕೇವಲ ರಾಜಕೀಯ ಆಯ್ಕೆಯಾಗಿ ಅಲ್ಲ ಅದು ತಾರತಮ್ಯವಿಲ್ಲದ, ಸಮಸಮಾಜ ನಿರ್ಮಾಣದ ದೃಢ ಸಂಕಲ್ಪದ ಚಳುವಳಿಯಾಗಿದೆ: ಅಪ್ಸರ್ ಕೊಡ್ಲಿಪೇಟೆ

ಕುಂದಾಪುರ, ಜುಲೈ 27: ಉಡುಪಿ ಜಿಲ್ಲೆಯ ಕುಂದಾಪುರದ ಶರೋನ್ ಹೋಟೆಲ್ ಸಭಾಂಗಣದಲ್ಲಿ ”ಪ್ರಸಕ್ತ ಕಾಲಘಟ್ಟದಲ್ಲಿ ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು” ಎಂಬ ಮಹತ್ವದ ವಿಷಯದ ಕುರಿತು ವಿಶೇಷ ವಿಚಾರ ಸಂಕಿರಣವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಎಸ್ಟಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಜನತೆಯ ನಂಬಿಕೆಗೆ ಪಾತ್ರವಾಗುವ, ನೈತಿಕತೆಯ ಅಡಿಪಾಯದ ಮೇಲೆ ನಿಂತ ಹೊಸ ರಾಜಕೀಯ ಚಳುವಳಿ ನಿರ್ಮಾಣದ ಅಗತ್ಯತೆಯನ್ನು ಒತ್ತಿಹೇಳಿದರು. ಧರ್ಮಾಧಾರಿತ ರಾಜಕಾರಣ, ಬಂಡವಾಳಶಾಹಿ ಹಾಗೂ ಮತಬ್ಯಾಂಕ್ ರಾಜಕೀಯಗಳು ಪ್ರಬಲವಾಗುತ್ತಿರುವ ಇಂದು, ತಳಮಟ್ಟದ ಸಮುದಾಯಗಳಲ್ಲಿ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಧರ್ಮನಿರಪೇಕ್ಷತೆಯನ್ನು ಕೇವಲ ಘೋಷಣೆಗಳಲ್ಲದೆ ನೈಜವಾಗಿ ಅನುಷ್ಠಾನಗೊಳಿಸುವ ಪರ್ಯಾಯ ರಾಜಕೀಯ ಚಳುವಳಿಗೆ ಬಲ ನೀಡುವುದು ಬಹಳ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು . ಈ ಚರ್ಚೆಯ ಪ್ರಭಾವದಿಂದ ಪ್ರೇರಿತವಾಗಿ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವಾರು ಉತ್ಸಾಹಿ ಯುವಕರು ಮತ್ತು ಹಿರಿಯರು ಎಸ್‌ಡಿಪಿಐ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ರಾಜ್ಯ ಪ್ರದಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಯವರು ಸಮ್ಮುಖದಲ್ಲಿ ಪಕ್ಷದ ಅಧಿಕೃತ ಸದಸ್ಯತ್ವವನ್ನು ಸ್ವೀಕರಿಸಿದರು. ಇಂತಹ ಚಟುವಟಿಕೆಗಳು ಪಕ್ಷದ ಮೌಲ್ಯಾಧಾರಿತ ಹೋರಾಟಕ್ಕೆ ಹೊಸ ಉತ್ಸಾಹ ನೀಡುತ್ತವೆ ಹಾಗೂ ಮುಂದಿನ ತಲೆಮಾರಿಗೆ ನವ ದಿಕ್ಕು ನೀಡುತ್ತವೆ ಅಪ್ಪರ್ ಕೊಡ್ಲಿಪೇಟೆ ಯವರು ಹೇಳಿದರು. ಎಸ್‌ಡಿಪಿಐ ಕೇವಲ
ರಾಜಕೀಯ ಆಯ್ಕೆಯಾಗಿ ಅಲ್ಲ – ಅದು ತಾರತಮ್ಯವಿಲ್ಲದ, ಸಮಸಮಾಜ ನಿರ್ಮಾಣದ
ದೃಢ ಸಂಕಲ್ಪದ ಚಳುವಳಿಯಾಗಿದೆ.ಈ ಕಾರ್ಯಕ್ರಮದ ವೇದಿಕೆಯಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಹನೀಫ್ ಮೂಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಶಂಶುದ್ದೀನ್, ಗಂಗೊಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ತಬ್ರೇಜ್, ಕಂಡೂರು ಗ್ರಾಮ ಪಂಚಾಯಿತಿ ಸದಸ್ಯ ಸುಹೇಲ್ ಮತ್ತಿತರ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

admin

Recent Posts

ಪತ್ರಿಕಾ ಪ್ರಕಟಣೆ – SDPI, ಕರ್ನಾಟಕ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…

5 days ago

ಶಹೀದ್ ಟಿಪ್ಪುಸುಲ್ತಾನ್

ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…

5 days ago

LPG ಗ್ಯಾಸಿನ ಬೆಲೆ ಏರಿಕೆ ಜನರ ಮೇಲೆ ಮತ್ತೊಂದು ಹೊರೆ!

ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…

1 week ago

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…

1 week ago

يوم مزدور

01 MAY 2026 محنت کشوں کا احترام، عزت “ ! زندگی، اور حقوق کا انصاف…

1 week ago

HAPPY LABOUR DAY

01 MAY 2026 "Respect Labour. Restore Dignity. Ensure Justice. This Labour Day, let every worker…

1 week ago