ಪತ್ರಿಕಾ ಪ್ರಕಟಣೆ*ಸ್ಥಳೀಯ ಸಂಸ್ಥೆಗಳ ಆಡಳಿತವು ಪ್ರಜಾಪ್ರಭುತ್ವದ ಅಡಿಪಾಯ: ಆಯ್ಕೆಯಾದ ಪ್ರತಿನಿಧಿಗಳು ಕಾರ್ಯಕ್ಷಮತೆಯ ಮೂಲಕ ಪಕ್ಷವನ್ನು ‘Emerging to Power’ ದಿಕ್ಕಿಗೆ ಮುನ್ನಡೆಸಬೇಕು” – ಅಫ್ಸರ್ ಕೊಡ್ಲಿಪೇಟೆ* *ಕಲ್ಯಾಣ ಕರ್ನಾಟಕ ಭಾಗದ ಎಸ್‌ಡಿಪಿಐ ಜನಪ್ರತಿನಿಧಿಗಳ ಸಭೆ**ಗುಲ್ಬರ್ಗ : 4 ಆಗಷ್ಟ್ 2025 –* ಸ್ಥಳೀಯ ಸಂಸ್ಥೆಗಳ ಆಡಳಿತವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ ಎಂಬ ಘೋಷಣೆಯೊಂದಿಗೆ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ವ್ಯಾಪ್ತಿಯ ಎಸ್‌ಡಿಪಿಐ ಪಕ್ಷದ ಚುನಾಯಿತ ಜನಪ್ರತಿನಿಧಿಗಳ ಮೇಲುಸ್ತುವಾರಿಗಳ (ERM) ವಿಶೇಷ ಸಭೆ, ರಾಜ್ಯ ಪ್ರದಾನ ಕಾರ್ಯದರ್ಶಿ ಮತ್ತು ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ERM ಉಸ್ತುವಾರಿ ಅಬ್ರಾರ್ ಅಹ್ಮದ್ ರವರ ನೇತೃತ್ವದಲ್ಲಿ ಗುಲ್ಬರ್ಗ ನಗರದಲ್ಲಿ ಜರುಗಿತು.ಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅಫ್ಸರ್ ಕೊಡ್ಲಿಪೇಟೆ ಅವರು, “ಪಕ್ಷದ ರಾಜಕೀಯ ಶಕ್ತಿ ಹಾಗೂ ಸಾರ್ವಜನಿಕ ಪ್ರಭಾವವನ್ನು ವಿಸ್ತರಿಸಲು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಮುಖವಾಗಿವೆ. ಈ ಹಿನ್ನಲೆಯಲ್ಲಿ, ಪಕ್ಷದ ಪರವಾಗಿ ಆಯ್ಕೆಯಾದ ಪ್ರತಿನಿಧಿಗಳು ರಾಜಕೀಯ ಬದ್ಧತೆ, ನೈತಿಕತೆ ಮತ್ತು ಕಾರ್ಯಕ್ಷಮತೆಯ ಮೂಲಕ ಪಕ್ಷವನ್ನು ‘Emerging to Power’ ದಿಕ್ಕಿಗೆ ಮುನ್ನಡೆಸುವಲ್ಲಿ ಪ್ರಮುಖ ಪಾತ್ರವಹಿಸಬೇಕಾಗಿದೆ,” ಎಂದು ಸೂಚಿಸಿದರು.ಅಬ್ರಾರ್ ಅಹ್ಮದ್ ಮಾತನಾಡುತ್ತಾ, “ಪಕ್ಷದ ಪರವಾಗಿ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ನಿರಂತರ ತರಬೇತಿಗಳಲ್ಲಿ ಭಾಗವಹಿಸಿ ಉತ್ತಮ ಆಡಳಿತದ ಮಾದರಿಯನ್ನು ನೀಡಬೇಕು,” ಎಂದು ಸಲಹೆ ನೀಡಿದರು.ಸಭೆಯಲ್ಲಿ ಪಾಲ್ಗೊಂಡ ಶಹಾಪುರ ನಗರಸಭಾ ಸದಸ್ಯೆ ಫಿರ್ದೋಸ್ ಖಾತೂನ್, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು ಬಳ್ಳಾರಿ ಮತ್ತು ಬೀಜಾಪುರ ಜಿಲ್ಲೆಗಳ ವಿವಿಧ ಪಂಚಾಯಿತಿಗಳ ಸದಸ್ಯರು ಮತ್ತು ಚುನಾಯಿತ ಪ್ರತಿನಿಧಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತ, ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು, ಸರಕಾರದ ಯೋಜನೆಗಳ ಅನುಷ್ಠಾನ ಹಾಗೂ ಜನರ ವಿಶ್ವಾಸ ಗಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.ಈ ಸಭೆ, ಪಕ್ಷದ ಜನಪರ ರಾಜಕೀಯ ಭದ್ರತೆಗಾಗಿ ದಿಕ್ಕು ತೋರಿದ ಹೆಜ್ಜೆಯಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗೆ ಬುನಾದಿ ಕಲ್ಪಿಸಿದೆ.ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್, ಗುಲ್ಬರ್ಗ ಜಿಲ್ಲಾಧ್ಯಕ್ಷರಾದ ಮೊಹಮ್ಮದ್ ಮೋಹಿಸಿನ್, ಯಾದಗಿರಿ ಜಿಲ್ಲಾಧ್ಯಕ್ಷರಾದ ಇಸಾಖ್  ಹುಸೇನ್, ಗುಲ್ಬರ್ಗ ಜಿಲ್ಲಾ ಕಾರ್ಯದರ್ಶಿ ಹಾಗೂ ERM ಉಸ್ತುವಾರಿ ಶಕೀಲ್ ಪಟೇಲ್ ಹಾಜರಿದ್ದರು.

admin

Recent Posts

Chalo Belagavi

Ambedkar Jatha-3 احتجاجی اجلاس | 15اگست Belagavi | 10:30 AM سورنا سودها مطالبات 2B ریزرویشن…

1 week ago

Chalo Belagavi Ambedkar Jatha-3

DEMAND'S MEET | 15th DECEMBER BELAGAVI 10:30 AM Suvarna Soudha DEMANDS Restore the 2B Reservation…

1 week ago

Chalo Belagavi

Ambedkar Jatha-3 Ehtijaji Ajlas BELAGAVI 10:30 AM Suvarna Soudha DEMANDS 2B Reservation ko dobara bahal…

1 week ago

ಸಾಮಾಜಿಕ ನಾಯಕ್ಕಾಗಿ

ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 3 📍 VENUE: Kudachi | Public Program SDPIKarnataka #AmbedkarJatha3 #chalobelagavi

1 week ago

Chalo Belagavi

Ambedkar Jatha-3 BJP ಮುಸ್ಲಿಮ್ ದ್ವೇಷದ ಭಾಗವಾಗಿ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಮುಸ್ಲಿಮ್ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುತ್ತದೆ. ಕಾಂಗ್ರೆಸ್ ಬಿಜೆಪಿ…

1 week ago

Chalo Belagavi Ambedkar Jatha-3

SDPI Karnataka SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ…

1 week ago