Categories: NewsPolitics

ಕರ್ನಾಟಕದಲ್ಲಿ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆ ಅಗತ್ಯ – ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಕರ್ನಾಟಕದಲ್ಲಿ ಸರಿ ಸುಮಾರು 15 ಲಕ್ಷ ಜನಸಂಖ್ಯೆ ಹೊಂದಿರುವ ಬ್ಯಾರಿ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ, ಬ್ಯಾರಿ ಅಭಿವೃದ್ಧಿ ನಿಗಮವನ್ನು ತಕ್ಷಣ ಸ್ಥಾಪಿಸಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದರು.

2025ರ ಆಗಸ್ಟ್ 10 ರಂದು ಮೈಸೂರಿನ ಕೆಆರ್ ಕನ್ವೆನ್ಷನ್ ಹಾಲ್‌ನಲ್ಲಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಬ್ಯಾರಿ ವೇಲ್ಫೇರ್ ಅಸೋಸಿಯೇಷನ್ ಮೈಸೂರು ಅವರ ಸಹಯೋಗದಲ್ಲಿ ನಡೆದ 2024ರ ಸಾಲಿನ ಬ್ಯಾರಿ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಬ್ಯಾರಿ ಸಂಗಮದಲ್ಲಿ ‘ಬೆಲ್ಕಿರಿ ದೈ’ ಮಾಸಿಕ ಪುಸ್ತಕವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಯು.ಹೆಚ್. ಉಮರ್ ವಹಿಸಿದರು.
ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2024ರ ಗೌರವ ಪ್ರಶಸ್ತಿಯನ್ನು ಬೆಂಗಳೂರಿನ ಮಕ್ಸೂದ್ ಅಹ್ಮದ್, ಕಟಿಪಳ್ಳದ ಹೈದರ್ ಅಲಿ ಮತ್ತು ಮೂಡಬಿದ್ರಿಯ ಪಿ.ಎಂ. ಹಸನಬ್ಬ ಅವರಿಗೆ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಅವರು ಬ್ಯಾರಿ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಕರೆ ನೀಡಿದರು.

ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯನ್ನು ಹೊತ್ತೊಯ್ಯುವ ಹಲವಾರು ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆಯಿತು

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

23 hours ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago