ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ – ಬಲಿ ಪಶುಗಳಾಗುತ್ತಿರುವ ಮುಸ್ಲಿಮರು

ಬೆಂಗಳೂರು : ಸೆಪ್ಟೆಂಬರ್ :10:
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸುಮಾರು 95% ಮುಸ್ಲಿಂ ಸಮುದಾಯದ ಮತಗಳಿಂದ ಅಧಿಕಾರಕ್ಕೆ ಬಂದಿದ್ದರೂ, ಇಂದು ಆ ಸರ್ಕಾರವೇ ಬಿಜೆಪಿ, ಆರ್‌.ಎಸ್‌.ಎಸ್, ಬಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ ಮುಂತಾದ ಕೋಮುವಾದಿ ಸಂಘಟನೆಗಳ ಒತ್ತಡಕ್ಕೆ ತಲೆಬಾಗುತ್ತಿದೆ. ಇದರ ಪರಿಣಾಮವಾಗಿ ಮುಸ್ಲಿಂ ಸಮುದಾಯವನ್ನು ಅವಮಾನಿಸುವ, ಹೀನಾಯಗೊಳಿಸುವ ಹೇಳಿಕೆಗಳು ಹೆಚ್ಚಳವಾಗುತ್ತಿದೆ .

ಉಪಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯೊಳಗೆ ಆರ್‌.ಎಸ್‌.ಎಸ್ ಗೀತೆಯನ್ನು ಹಾಡಿದ ಘಟನೆ, ಇಂದು ಗೃಹ ಸಚಿವ ಡಾ.ಪರಮೇಶ್ವರ್ ಅವರು ಎ.ಬಿ.ವಿ.ಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು, ಶ್ರಿರಂಗಪಟ್ಟಣದ ಕಾಂಗ್ರೆಸ್ ಶಾಸಕನ ಮುಸ್ಲಿಂ ವಿರೋಧಿ ಹೇಳಿಕೆ ಹಾಗೂ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆಗೆ ಸಂಬಂಧಿಸಿದ ಘಟನೆಯಲ್ಲಿ ಖುದ್ದು ಐಜಿಪಿ ಯವರು ಪತ್ರಿಕಾಗೋಷ್ಠಿ ನಡೆಸಿ ಮಸೀದಿಯಿಂದ ಯಾವುದೇ ಕಲ್ಲು ತೂರಾಟ ಆಗಿರುವ ಸಿಸಿ ಟಿವಿ ಪೋಟೇಜ್ ಇಲ್ಲ ಎಂಬ ಹೇಳಿಕೆ ನೀಡಿದ್ದರೂ “ನಾವು ಕೇವಲ ಮುಸ್ಲಿಮರನ್ನು ಮಾತ್ರ ಬಂಧಿಸಿದ್ದೇವೆ, ಒಬ್ಬ ಹಿಂದುವನ್ನೂ ಬಂಧಿಸಿಲ್ಲ” ಎಂಬ ಅವಮಾನಕಾರಿ ಹೇಳಿಕೆ, ಇವು ಕಾಂಗ್ರೆಸ್ ಸರ್ಕಾರವು ಸಂವಿಧಾನಿಕ ಮೌಲ್ಯಗಳನ್ನು ತುಳಿಯುತ್ತಾ, ಧರ್ಮದ ಆಧಾರದ ಮೇಲೆ ಪಕ್ಷಪಾತದ ನಿಲುವು ತಾಳುತ್ತಿದೆ ಎಂಬುದನ್ನು ತೋರಿಸುತ್ತವೆ.

ಇದರಲ್ಲಿ ಮತ್ತೊಂದು ಸ್ಪಷ್ಟ ಚಿತ್ರಣವೆಂದರೆ— ಕಾಂಗ್ರೆಸ್ ನಾಯಕರು ಮೊದಲಿಗೆ ತಪ್ಪು ಮಾಡುತ್ತಾರೆ, ನಂತರ ಅದನ್ನು ಮುಚ್ಚಿಹಾಕಲು ಅಥವಾ ಸಮರ್ಥಿಸಲು ಗೊಂದಲ ಸೃಷ್ಟಿಸುತ್ತಾರೆ. ಇದು ಜನರಲ್ಲಿ ಅನುಮಾನ ಹುಟ್ಟಿಸುತ್ತದೆ. ಕಾಂಗ್ರೆಸ್ ನಾಯಕರು ನಿಜವಾಗಿಯೂ ಸಂವಿಧಾನದ ಮಾರ್ಗದಲ್ಲಿದ್ದರಾ, ಅಥವಾ ಸಂಘ ಪರಿವಾರದ ಆಟವನ್ನು ಆಡಿಕೊಂಡೇ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರಾ?
“ಧರ್ಮನಿರಪೇಕ್ಷ ಸರ್ಕಾರ” ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರ, ಧಾರ್ಮಿಕ ದ್ವೇಷ ಹರಡುವ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿದವರು, ಧಾರ್ಮಿಕ ಧ್ವಜಗಳನ್ನು ದಹಿಸಿದವರು ಹಾಗೂ ಪ್ರತಾಪ್ ಸಿಂಹ, ಮತ್ತು C.T. ರವಿ ಮುಂತಾದವರು ನೀಡಿದ ಧಾರ್ಮಿಕ ದ್ವೇಷ ಹರಡುವ ಅಪರಾಧಿ ಹೇಳಿಕೆಗಳ ವಿರುದ್ಧ ಯಾವ ಕಾನೂನು ಕ್ರಮ ಕೈಗೊಂಡಿದೆ ಎಂಬುದನ್ನು ಉತ್ತರಿಸಬೇಕು.
ಅಪರಾಧಿ ಯಾವ ಧರ್ಮದವನಾಗಿದ್ದರೂ ಅವನನ್ನು ಕಾನೂನಿನ ಪ್ರಕಾರ ಬಂಧಿಸುವುದು ಸರ್ಕಾರದ ಕರ್ತವ್ಯ. ಆದರೆ, ಒಂದು ಸಮುದಾಯವನ್ನೇ ಗುರಿ ಮಾಡಿಕೊಂಡು ಬಂಧಿಸುವುದು ಸಂವಿಧಾನ ವಿರೋಧಿ ಹಾಗೂ ಸಮಾಜದಲ್ಲಿ ಅಸಮಾಧಾನವನ್ನು ಉಂಟುಮಾಡುವ ನಡೆಯಾಗಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಕರ್ನಾಟಕ, ಕಾಂಗ್ರೆಸ್ ಸರ್ಕಾರದ ಈ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ. . ಇಂತಹ ಹೀನ ಹೇಳಿಕೆಗಳು ಮತ್ತು ಅಸಮಾನತೆ ಮುಂದುವರಿದರೆ, ಎಸ್‌ಡಿಪಿಐ ರಾಜ್ಯದಾದ್ಯಂತ ಭಾರಿ ಜನಾಂದೋಲನ ನಡೆಸಿ, ಕಾಂಗ್ರೆಸ್ ಸರ್ಕಾರದ ಕರಾಳ ಮುಖವನ್ನು ಬಯಲಿಗೆಳೆದು ತೋರಿಸುವ ಹೋರಾಟ ಆರಂಭಿಸಬೇಕಾಗುತ್ತದೆ ಎಂದು ನಾವು ಕರ್ನಾಟಕ ಸರ್ಕಾರವನ್ನು ಎಚ್ಚರಿಸುತ್ತಿದ್ದೇವೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಕರ್ನಾಟಕ

admin

Recent Posts

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

18 hours ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

2 days ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

2 days ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

1 week ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

2 weeks ago