Categories: featureNewsPolitics

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಬಲವಾಗಿ ಖಂಡಿಸುತ್ತದೆ ಹಾಗೂ ಅಪರಾಧಿ ವಕೀಲನಾದ ರಾಕೇಶ್ ಕಿಶೋರ್ ನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸುತ್ತದೆ.

ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗುತ್ತಾ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಒಬ್ಬ ವಕೀಲನಾಗಿ ಈ ರೀತಿ ದೇಶವೇ ತಲೆತಗ್ಗಿಸುವ ಕಾರ್ಯ ಎಸಗಿರುವುದು ಇತ್ತೀಚಿನ ದಿನಗಳಲ್ಲಿ ಸಂಘಪರಿವಾರದ ನಾಯಕರು ಹಾಗೂ ಬಿಜೆಪಿಯ ನಾಯಕರು ಬಹಿರಂಗವಾಗಿ ಕೋಮುಪ್ರಚೋದಿತ ಹೇಳಿಕೆಗಳು ನೀಡಿರುವುದೇ ಇಂತಹ ಘಟನೆಗಳು ನಡೆಯಲು ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಕೇಂದ್ರ ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ವಕೀಲನನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಇದಕ್ಕೆ ಪ್ರಚೋದನೆ ನೀಡಿದವರನ್ನು ಕೂಡ ಬಂಧಿಸ ಬೇಕು ಹಾಗೂ ಮುಖ್ಯ ನ್ಯಾಯ ಮೂರ್ತಿಗಳಾದ ಬಿ.ಆರ್ ಗವಾಯಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸುತ್ತದೆ.

~ಮುಜಾಹಿದ್ ಪಾಷಾ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

SDPIKarnataka

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago