Categories: featureNewsPolitics

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ ಜನತೆ ಆಚರಿಸುತ್ತಿದ್ದರು. ಯಾರ ಬೇಡಿಕೆ ಇಲ್ಲದೆ, ಏಕಾಏಕಿ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಟಿಪ್ಪು ಜಯಂತಿ ಆಚರಿಸುವ ಘೋಷಣೆ ಮಾಡಿ, ಕೇವಲ ಬಿಜೆಪಿ ಮತ್ತು ಸಂಘಪರಿವಾರದ ಒತ್ತಡಕ್ಕೆ ಮಣಿದು ತಾನು ಟಿಪ್ಪು ಜಯಂತಿಯನ್ನು ಆಚರಿಸುವುದನ್ನು ಕೈ ಬಿಟ್ಟಿದಲ್ಲದೇ ಶ್ರೀರಂಗಪಟ್ಟಣ ಸೇರಿದಂತೆ ರಾಜ್ಯಾದ್ಯಂತ ಜನತೆ ಖಾಸಗಿಯಾಗಿಯೂ ಜಯಂತಿ ಆಚರಿಸಲೂ ನಿಷೇಧ ಹೇರಿ ಮೃದು ಹಿಂದುತ್ವವನ್ನು ಪ್ರದರ್ಶಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ರವರನ್ನು ಅವಮಾನಿಸಲಾಗಿದೆ. ಶ್ರೀರಂಗಪಟ್ಟಣದಲ್ಲಿ ಟಿಪ್ಪು ಅಭಿಮಾನಿಗಳಿಗೆ ಟಿಪ್ಪು ಸಮಾಧಿಯ ದರ್ಶನ ಮಾಡಕ್ಕೂ ಅವಕಾಶ ನಿರಾಕರಿಸಿದ ರಾಜ್ಯ ಸರ್ಕಾರ ಬಜರಂಗದಳದ ಅನೇಕ ಕಾರ್ಯಕ್ರಮಗಳಿಗೆ ಶ್ರೀರಂಗಪಟ್ಟಣದಲ್ಲಿ ಅವಕಾಶ ನೀಡಿತ್ತು. ಇದರಿಂದ ಕಾನೂನು ಸುವ್ಯಸ್ಥೆ ಹಾಳಾಗಲ್ಲಿಲವೇ..?

ಟಿಪ್ಪು ಸುಲ್ತಾನ್ ಮುಸ್ಲಿಂ ಅಲ್ಲದೆ, ಈ ನೆಲದ ಬೇರೆ ಯಾವುದೇ ಪ್ರಬಲ ಜಾತಿಯಲ್ಲಿ ಹುಟ್ಟಿದ್ದರೆ, ಟಿಪ್ಪು ಸಾಧನೆಗಾಗಿ ಅವರನ್ನು ಜಾಗತಿಕ ನಾಯಕನಾಗಿ ಈ ನಮ್ಮ ರಾಜಕೀಯ ವ್ಯವಸ್ಥೆ ವಿಜೃಂಭಿಸುತಿತ್ತು. ಟಿಪ್ಪು ಕೇವಲ ಮುಸ್ಲಿಂನಾಗಿರುವುದಕ್ಕಾಗಿಯೇ ಈ ದುರಂತಮಯ ವಾತಾವರಣ ಕಾಣಲು ಸಿಗುತ್ತಿದೆ.

ಚುನಾವಣೆಯ ಸಂದರ್ಭದಲ್ಲಿ ತಾನು ಜಾತ್ಯತೀತ ತತ್ವವನ್ನು ಪ್ರತಿಪಾದಿಸುವ ಪಕ್ಷ, ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡಿ ಎಂದು ಗುಲ್ಲೆಬ್ಬಿಸಿ,

ಮುಕ್ತ ಮುಸ್ಲಿಂ ಸಮುದಾಯದ ಮತವನ್ನು ಪಡೆದು ಅಧಿಕಾರ ಹಿಡಿದ ನಂತರ ಎಂದಿನಂತೆ ಮುಸ್ಲಿಂ ಸಮುದಾಯಕ್ಕೆ ಮೋಸ ಮಾಡುವುದು ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯಾಗಿ ಬಿಟ್ಟಿದೆ. ಕಾಂಗ್ರೆಸ್ ಪಕ್ಷದ ಈ ಒಳವರ್ಮವನ್ನು ಮುಸ್ಲಿಂ ಸಮುದಾಯ ಅರ್ಥ ಮಾಡಿಕೊಳ್ಳಲ್ಲಿಲ್ಲ ಎಂದರೆ ಅದು ಆತ್ಮಹತ್ಯೆ ಮಾಡಿಕೊಂಡಂತೆ ಆಗುತ್ತದೆ.

~ಮುಜಾಹಿದ್ ಪಾಷಾ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

شکر یہ داؤ انگیرے کے عو عوام !

ایس ڈی پی آئی کو آپ کی جانب سے ملنے والے 18995 خودداری کے ووٹوں…

1 day ago

باوقار سياست کے لیے

میں شامل ہوں SDPI 10 ΜΑΥ 2026 ΤΟ 25 MAY 2026 ممبر شپ کیمپین SDPIKarnataka…

5 days ago

Join SDPI For politics of DIGNITY

10 ΜΑΥ 2026 ΤΟ 25 MAY 2026 MEMBERSHIP CAMPAIGN Social Democratic Party of India -Karnataka…

5 days ago

ಪತ್ರಿಕಾ ಪ್ರಕಟಣೆ – SDPI, ಕರ್ನಾಟಕ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…

2 weeks ago

ಶಹೀದ್ ಟಿಪ್ಪುಸುಲ್ತಾನ್

ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…

2 weeks ago