Categories: featureNewsPolitics

ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ – ಹುಬ್ಬಳ್ಳಿ

ಹುಬ್ಬಳ್ಳಿ, 15-11-2025: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅಬ್ದುಲ್ ಹನ್ನಾನ್ ರವರು ಮುಂಬರುವ ಚುನಾವಣೆಗಳ ತಯಾರಿ, ಸಾಮಾಜಿಕ ಸಮಸ್ಯೆಗಳ ಗುರುತುಪಡಿಸುವುದು ಮತ್ತು ಅವುಗಳಿಗೆ ತುರ್ತು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ವಿಷಯಗಳನ್ನು ಪ್ರಸ್ತಾಪಿಸಿ ಚರ್ಚಿಸಿದರು. ಪಕ್ಷವನ್ನು ಬಲಪಡಿಸುವುದು, ಬೂತ್ ಮಟ್ಟದ ಚಟುವಟಿಕೆಗಳನ್ನು ವೇಗಗೊಳಿಸುವುದು ಮತ್ತು ಜನಸಂಪರ್ಕ ಕಾರ್ಯಕ್ರಮಗಳನ್ನು ಹೆಚ್ಚಿಸುವ ಕುರಿತು ಮಾರ್ಗದರ್ಶನ ನೀಡಿದರು.

ಉತ್ತರ ಕರ್ನಾಟಕದ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ತಮ್ಮ ತಮ್ಮ ಜಿಲ್ಲೆಗಳ ಪಕ್ಷದ ಕಾರ್ಯಗಳ ಪ್ರಗತಿ ಹಾಗೂ ಎದುರಿರುವ ರಾಜಕೀಯ ಸವಾಲುಗಳನ್ನು ಸಭೆಯಲ್ಲಿ ಹಂಚಿಕೊಂಡರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹೀದ್ ಪಾಷಾ ರವರು ಪರಿಣಾಮಕಾರಿ ಕಾರ್ಯವೈಖರಿ, ಜನಸಂಪರ್ಕ ಮತ್ತು ವಿಷಯಾಧಾರಿತ ಚಳುವಳಿಗಳ ಮಹತ್ವವನ್ನು ಒತ್ತಿಹೇಳಿದರು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟು ಪಕ್ಷದ ಚಟುವಟಿಕೆಗಳನ್ನು ಇನ್ನಷ್ಟು ವೇಗಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಸಭೆಯ ಅಂತ್ಯದಲ್ಲಿ, ಪಕ್ಷದ ಧೈಯವನ್ನು ಏಕತೆ, ಶಿಸ್ತು ಮತ್ತು ಸಮರ್ಪಣೆಯೊಂದಿಗೆ ಮುನ್ನಡೆಸುವ ಸಂಕಲ್ಪ ವ್ಯಕ್ತಪಡಿಸಲಾಯಿತು. ರಾಜ್ಯ ಕಾರ್ಯದರ್ಶಿ ಅಪ್ಸರ್ ಕೆ.ಆರ್.ನಗರ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.

admin

Recent Posts

ಜನರಿಗೆ ಅಧಿಕಾರ, ಎಸ್‌.ಡಿ.ಪಿ.ಐ ಸಾರಥ್ಯಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಗೆನೂತನವಾಗಿ ಆಯ್ಕೆಯಾದ ನಾಯಕರ

ಅಭಿನಂದನಾ ರ್ಯಾಲಿ ಮತ್ತು ಸಮಾವೇಶ 21 ಜನವರಿ 2026 ರ್ಯಾಲಿ: ಸಂಜೆ 04:00 | ಅಂಬೇಡ್ಕ‌ರ್ (ಜ್ಯೋತಿ) ವೃತ್ತದಿಂದ ಪುರಭವನದ…

5 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾರಾಮದುರ್ಗ ವಿಧಾನಸಭಾ ಸಮಿತಿ, ಬೆಳಗಾವಿ

SIR ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ - ಅಬ್ರಾರ್ 12.01.2026 ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸೋಶಿಯಲ್…

5 hours ago

10.01.2026

ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ…

5 hours ago

Condolence

The passing away of Ameer-e-Shariat of Karnataka, the respected religious and social leader Maulana Sageer…

12 hours ago

انتقال پر ملال

امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…

12 hours ago

Condolence

Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…

13 hours ago