Categories: featureNewsPolitics

ಮಾನ್ಯ ಮುಖ್ಯಮಂತ್ರಿಗಳೇ ಕೇವಲ ರಾಜಕೀಯ ಹೇಳಿಕೆ ಸಾಲದು, ಅಧಿಕೃತ ಆದೇಶ ಪತ್ರ ಹೊರಡಿಸಿ.

ಇವತ್ತಿನ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ಮುಟ್ಟಿದೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿರಾಶ್ರಿತರಿಗೆ ಪರ್ಯಾಯ ಜಾಗ ಕಲ್ಪಿಸುವ ಭರವಸೆಯನ್ನು ನೀಡಿದ್ದಾರೆ. ಆದರೆ ಭರವಸೆ ಸಾಕಾಗದು, ಕಾರ್ಯರೂಪ ಬೇಕು. ಇವತ್ತಿನ ನಮ್ಮ ಹೋರಾಟ, ಪ್ರತಿಭಟನೆ ಮತ್ತು ಜನಪರ ಒತ್ತಡದ ಪರಿಣಾಮವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಗಿಲು ಬಡಾವಣೆಯ ಧ್ವಂಸದಿಂದ ನಿರಾಶ್ರಿತರಾದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ. ಆದರೆ, ಇದು ಕೇವಲ ಹೇಳಿಕೆಯಾಗಿ ಉಳಿಯದೇ ಕಾರ್ಯರೂಪಕ್ಕೆ ಬರಲೇಬೇಕು. ಭರವಸೆಗಳ ಮೇಲೆ ಬದುಕು ಕಟ್ಟಲಾಗುವುದಿಲ್ಲ.

ಜನರಿಗೆ ಬೇಕಾಗಿರುವುದು ತಕ್ಷಣದ ಪರಿಹಾರ, ಪುನರ್ವಸತಿ ಮತ್ತು ಶಾಶ್ವತ ಮನೆಗಳು. ಮುಖ್ಯಮಂತ್ರಿಗಳ ಭರವಸೆಯನ್ನು ಸ್ವಾಗತಿಸುತ್ತೇವೆ. ಆದರೆ ಒತ್ತಡ ಇಲ್ಲದೆ ನ್ಯಾಯ ಸಿಗುವುದಿಲ್ಲ ಎಂಬುದನ್ನು ಅನುಭವ ನಮಗೆ ಕಲಿಸಿದೆ. ಆದ್ದರಿಂದ, ಈ ಭರವಸೆ ಕಾರ್ಯರೂಪಕ್ಕೆ ಬರಬೇಕೆಂದು ಆಗ್ರಹಿಸಿ ಬುಲ್ಲೋಜರ್ ಸರ್ವಾಧಿಕಾರ ರಾಜಕೀಯ ಧೋರಣೆಯನ್ನು ಖಂಡಿಸಿ ನಾಳೆ ಎಸ್‌ಡಿಪಿಐ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

SDPIKarnataka #kogilulayout #bangalore

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago