ಇವತ್ತಿನ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ಮುಟ್ಟಿದೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿರಾಶ್ರಿತರಿಗೆ ಪರ್ಯಾಯ ಜಾಗ ಕಲ್ಪಿಸುವ ಭರವಸೆಯನ್ನು ನೀಡಿದ್ದಾರೆ. ಆದರೆ ಭರವಸೆ ಸಾಕಾಗದು, ಕಾರ್ಯರೂಪ ಬೇಕು. ಇವತ್ತಿನ ನಮ್ಮ ಹೋರಾಟ, ಪ್ರತಿಭಟನೆ ಮತ್ತು ಜನಪರ ಒತ್ತಡದ ಪರಿಣಾಮವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಗಿಲು ಬಡಾವಣೆಯ ಧ್ವಂಸದಿಂದ ನಿರಾಶ್ರಿತರಾದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ. ಆದರೆ, ಇದು ಕೇವಲ ಹೇಳಿಕೆಯಾಗಿ ಉಳಿಯದೇ ಕಾರ್ಯರೂಪಕ್ಕೆ ಬರಲೇಬೇಕು. ಭರವಸೆಗಳ ಮೇಲೆ ಬದುಕು ಕಟ್ಟಲಾಗುವುದಿಲ್ಲ.
ಜನರಿಗೆ ಬೇಕಾಗಿರುವುದು ತಕ್ಷಣದ ಪರಿಹಾರ, ಪುನರ್ವಸತಿ ಮತ್ತು ಶಾಶ್ವತ ಮನೆಗಳು. ಮುಖ್ಯಮಂತ್ರಿಗಳ ಭರವಸೆಯನ್ನು ಸ್ವಾಗತಿಸುತ್ತೇವೆ. ಆದರೆ ಒತ್ತಡ ಇಲ್ಲದೆ ನ್ಯಾಯ ಸಿಗುವುದಿಲ್ಲ ಎಂಬುದನ್ನು ಅನುಭವ ನಮಗೆ ಕಲಿಸಿದೆ. ಆದ್ದರಿಂದ, ಈ ಭರವಸೆ ಕಾರ್ಯರೂಪಕ್ಕೆ ಬರಬೇಕೆಂದು ಆಗ್ರಹಿಸಿ ಬುಲ್ಲೋಜರ್ ಸರ್ವಾಧಿಕಾರ ರಾಜಕೀಯ ಧೋರಣೆಯನ್ನು ಖಂಡಿಸಿ ನಾಳೆ ಎಸ್ಡಿಪಿಐ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…