Categories: featureNewsPolitics

ಮಾನ್ಯ ಮುಖ್ಯಮಂತ್ರಿಗಳೇ ಕೇವಲ ರಾಜಕೀಯ ಹೇಳಿಕೆ ಸಾಲದು, ಅಧಿಕೃತ ಆದೇಶ ಪತ್ರ ಹೊರಡಿಸಿ.

ಇವತ್ತಿನ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ಮುಟ್ಟಿದೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿರಾಶ್ರಿತರಿಗೆ ಪರ್ಯಾಯ ಜಾಗ ಕಲ್ಪಿಸುವ ಭರವಸೆಯನ್ನು ನೀಡಿದ್ದಾರೆ. ಆದರೆ ಭರವಸೆ ಸಾಕಾಗದು, ಕಾರ್ಯರೂಪ ಬೇಕು. ಇವತ್ತಿನ ನಮ್ಮ ಹೋರಾಟ, ಪ್ರತಿಭಟನೆ ಮತ್ತು ಜನಪರ ಒತ್ತಡದ ಪರಿಣಾಮವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಗಿಲು ಬಡಾವಣೆಯ ಧ್ವಂಸದಿಂದ ನಿರಾಶ್ರಿತರಾದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ. ಆದರೆ, ಇದು ಕೇವಲ ಹೇಳಿಕೆಯಾಗಿ ಉಳಿಯದೇ ಕಾರ್ಯರೂಪಕ್ಕೆ ಬರಲೇಬೇಕು. ಭರವಸೆಗಳ ಮೇಲೆ ಬದುಕು ಕಟ್ಟಲಾಗುವುದಿಲ್ಲ.

ಜನರಿಗೆ ಬೇಕಾಗಿರುವುದು ತಕ್ಷಣದ ಪರಿಹಾರ, ಪುನರ್ವಸತಿ ಮತ್ತು ಶಾಶ್ವತ ಮನೆಗಳು. ಮುಖ್ಯಮಂತ್ರಿಗಳ ಭರವಸೆಯನ್ನು ಸ್ವಾಗತಿಸುತ್ತೇವೆ. ಆದರೆ ಒತ್ತಡ ಇಲ್ಲದೆ ನ್ಯಾಯ ಸಿಗುವುದಿಲ್ಲ ಎಂಬುದನ್ನು ಅನುಭವ ನಮಗೆ ಕಲಿಸಿದೆ. ಆದ್ದರಿಂದ, ಈ ಭರವಸೆ ಕಾರ್ಯರೂಪಕ್ಕೆ ಬರಬೇಕೆಂದು ಆಗ್ರಹಿಸಿ ಬುಲ್ಲೋಜರ್ ಸರ್ವಾಧಿಕಾರ ರಾಜಕೀಯ ಧೋರಣೆಯನ್ನು ಖಂಡಿಸಿ ನಾಳೆ ಎಸ್‌ಡಿಪಿಐ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

SDPIKarnataka #kogilulayout #bangalore

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago