Categories: featureNewsPolitics

ಚುನಾವಣಾ ನಿರ್ವಹಣಾ ತರಬೇತಿ ಕಾರ್ಯಾಗಾರ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಯಚೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಇಂದು ಮುದ್ಗಲ್ ನಲ್ಲಿ ಚುನಾವಣಾ ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಾಗಾರದಲ್ಲಿ ಚುನಾವಣಾ ಪ್ರಕ್ರಿಯೆಗಳು, ಪರಿಣಾಮಕಾರಿ ಚುನಾವಣಾ ನಿರ್ವಹಣೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವುದು, ವಿಳಾಸ ಬದಲಾವಣೆ, ಬೂತ್ ನಿರ್ವಹಣೆ, SIR ನ Votters Mapping ಹಾಗೂ ಪಕ್ಷದ ಕಾರ್ಯಕರ್ತರ ಜವಾಬ್ದಾರಿ ಇತ್ಯಾದಿ ವಿಷಯಗಳ ಕುರಿತು ಸಮಗ್ರ ತರಬೇತಿ ನೀಡಲಾಯಿತು.

ಪಕ್ಷದ ಜಿಲ್ಲಾ ಮಟ್ಟದ ಮುಖಂಡರು, ಬೂತ್ ಮಟ್ಟದ ಚುನಾವಣಾ ಉಸ್ತುವಾರಿಗಳು, ವಿಮೆನ್ ಇಂಡಿಯಾ ಮೂಮೆಂಟ್ ನ ನಾಯಕಿಯರು ಮತ್ತು ವಿವಿಧ ಕ್ಷೇತ್ರಗಳ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದರು. ಈ ತರಬೇತಿ ಕಾರ್ಯಾಗಾರವು ಪಕ್ಷದ ಸಂಘಟನಾ ಬಲವರ್ಧನೆಗೆ, ವಿಶೇಷವಾಗಿ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ತಯಾರಾಗುವ ದೃಷ್ಟಿಯಿಂದ ಬಹುಮುಖ್ಯ ಹೆಜ್ಜೆಯಾಗಿದೆ.

ಸಭೆಯಲ್ಲಿ ಮಾತನಾಡಿದವರು, ಚುನಾವಣೆ ನ್ಯಾಯಸಮ್ಮತವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲು ಸಂಘಟಿತ ಪ್ರಯತ್ನ, ಪ್ರಬುದ್ದ ಮತದಾರ ಸಂಪರ್ಕ ಹಾಗೂ ನಿಖರ ನಿರ್ವಹಣೆಯ ಅಗತ್ಯತೆಯನ್ನು ಒತ್ತಿಹೇಳಿದರು. ಪ್ರತಿ ಬೂತ್ ಮಟ್ಟದ ಕಾರ್ಯಕರ್ತರೂ ತಮಗೆ ನೀಡಲಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ಪಕ್ಷದ ಬಲ ವೃದ್ಧಿಯಾಗುತ್ತದೆ ಎಂಬುದು ಎಲ್ಲರ ಅಭಿಪ್ರಾಯವಾಗಿತ್ತು.

ಈ ತರಬೇತಿಯನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯರುಗಳಾದ ಅಬ್ರಾರ್ ಅಹ್ಮದ್‌, ಅಕ್ಬರ್ ನಾಗುಂಡಿ ಮತ್ತು ರಾಜ್ಯ ಮುಖಂಡರಾದ ಯೂಸುಫ್ ಮೋದಿ ಅವರು ನಡೆಸಿಕೊಟ್ಟರು.

ಕಾರ್ಯಾಗಾರದಲ್ಲಿ ಚರ್ಚಿಸಲ್ಪಟ್ಟ ಮಾರ್ಗಸೂಚಿಗಳು ಮುಂದಿನ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಮಾರ್ಗದರ್ಶಿಯಾಗಲಿವೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ರಫಿ ಖಾಜಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಹ್ಮದ್ ರಝಾ ಖಾಝಿ, ಜಿಲ್ಲಾ ಉಪಾಧ್ಯಕ್ಷರಾದ ಪಾಷಾ ಕಡ್ಡಿಪುಡಿ,, ವಿಮೆನ್ ಇಂಡಿಯಾ ಮೂಮೆಂಟ್ ನ ಜಿಲ್ಲಾಧ್ಯಕ್ಷೆ ಮಾಲನ್ ಬೇಗಂ ಉಪಸ್ಥಿತರಿದ್ದರು.

admin

Recent Posts

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

1 day ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

1 day ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

7 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago