Categories: featureNewsPolitics

ದಾವಣಗೆರೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾದ SIR ಕುರಿತು ಜನಜಾಗೃತಿ ಹಾಗೂ ಉಪಚುನಾವಣೆ ಕುರಿತು ಸಮಾಲೋಚನಾ ಸಭೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿದ್ದ ಎಲ್ಲಾ ವ್ಯವಸ್ಥೆಗಳನ್ನು ಅತ್ಯುತ್ತಮವಾಗಿ ರೂಪಿಸಿ, ಯಾವುದೇ ವೈಯಕ್ತಿಕ ಲಾಭ, ಸ್ವಾರ್ಥ, ಆಶೆ–ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ಹಗಲು–ರಾತ್ರಿ ಎನ್ನದೇ ಶ್ರಮಿಸಿ ಸಹಕರಿಸಿದ ದಾವಣಗೆರೆ ಜಿಲ್ಲೆಯ ಎಸ್‌ಡಿಪಿಐ ಪಕ್ಷದ ನಾಯಕರು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ಪಕ್ಷದ ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳು.

ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ವದ ಪ್ರಯತ್ನವಾಗಿತ್ತು. ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಶಿಸ್ತಿನಿಂದ, ಬದ್ಧತೆಯಿಂದ ಮತ್ತು ಸಂಘಟಿತವಾಗಿ ಯಶಸ್ವಿಗೊಳಿಸಿರುವುದು ದಾವಣಗೆರೆ ಜಿಲ್ಲೆಯ ಸಂಘಟನಾ ಶಕ್ತಿಗೆ ಸಾಕ್ಷಿಯಾಗಿದೆ.

ಸಾಮಾಜಿಕ ನ್ಯಾಯ, ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆ ಮತ್ತು ದಮನಿತರ ಧ್ವನಿಯಾಗಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ದಿಶೆಯಲ್ಲಿ ನಿಮ್ಮ ನಿರಂತರ ತ್ಯಾಗ, ಶ್ರಮ ಮತ್ತು ಬದ್ಧತೆ ಶ್ಲಾಘನೀಯವಾಗಿದೆ. ನಿಮ್ಮ ಈ ಸೇವಾಭಾವನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೋರಾಟಗಳಿಗೆ ಶಕ್ತಿ ನೀಡಲಿದೆ ಎಂಬ ವಿಶ್ವಾಸ ನನಗಿದೆ.

ಪಕ್ಷದ ತತ್ವ, ಶಿಸ್ತು ಮತ್ತು ಹೋರಾಟದ ಮನೋಭಾವವನ್ನು ನೆಲಮಟ್ಟದಲ್ಲಿ ಜೀವಂತವಾಗಿ ಉಳಿಸಿಕೊಂಡು ಸಾಗುತ್ತಿರುವ ನಿಮ್ಮೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳು.

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ
ಎಸ್‌ಡಿಪಿಐ ಕರ್ನಾಟಕ

admin

Recent Posts

ایس آئی آر کے نفاذ کے پیچھے

سازش کے خلاف عوامی بیداری اور ضمنی انتخاب کے سلسلے میں مشاورتی اجلاس سوشل ڈیموکریٹک…

1 week ago

Public Awareness Program on the Conspiracy

Behind the Implementation of SIR and a Consultative Meeting on the By-Election The Social Democratic…

1 week ago