ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ವದ ಪ್ರಯತ್ನವಾಗಿತ್ತು. ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಶಿಸ್ತಿನಿಂದ, ಬದ್ಧತೆಯಿಂದ ಮತ್ತು ಸಂಘಟಿತವಾಗಿ ಯಶಸ್ವಿಗೊಳಿಸಿರುವುದು ದಾವಣಗೆರೆ ಜಿಲ್ಲೆಯ ಸಂಘಟನಾ ಶಕ್ತಿಗೆ ಸಾಕ್ಷಿಯಾಗಿದೆ.
ಸಾಮಾಜಿಕ ನ್ಯಾಯ, ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆ ಮತ್ತು ದಮನಿತರ ಧ್ವನಿಯಾಗಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ದಿಶೆಯಲ್ಲಿ ನಿಮ್ಮ ನಿರಂತರ ತ್ಯಾಗ, ಶ್ರಮ ಮತ್ತು ಬದ್ಧತೆ ಶ್ಲಾಘನೀಯವಾಗಿದೆ. ನಿಮ್ಮ ಈ ಸೇವಾಭಾವನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೋರಾಟಗಳಿಗೆ ಶಕ್ತಿ ನೀಡಲಿದೆ ಎಂಬ ವಿಶ್ವಾಸ ನನಗಿದೆ.
ಪಕ್ಷದ ತತ್ವ, ಶಿಸ್ತು ಮತ್ತು ಹೋರಾಟದ ಮನೋಭಾವವನ್ನು ನೆಲಮಟ್ಟದಲ್ಲಿ ಜೀವಂತವಾಗಿ ಉಳಿಸಿಕೊಂಡು ಸಾಗುತ್ತಿರುವ ನಿಮ್ಮೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳು.
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ
ಎಸ್ಡಿಪಿಐ ಕರ್ನಾಟಕ
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…