ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ನಗರದಲ್ಲಿ Social Democratic Party of India (SDPI) ವತಿಯಿಂದ “ಎಸ್ಐಆರ್ ಭಯ ಬೇಡ, ಜಾಗೃತಿ ಇರಲಿ” ಎಂಬ ಘೋಷಣೆಯಡಿ ಜನಜಾಗೃತಿ ಸಭೆ ಯಶಸ್ವಿಯಾಗಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಒಕ್ಕೂಟ ಬಿಜೆಪಿ ಸರ್ಕಾರವು ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್ಐಆರ್ ಪ್ರಕ್ರಿಯೆಯ ಮೂಲಕ ಭಾರತೀಯರ ನಾಗರಿಕತ್ವವನ್ನು ಪ್ರಶ್ನಿಸುವ ದುರಾಲೋಚನೆಗೆ ಮುಂದಾಗಿದೆ ಎಂದು ತೀವ್ರವಾಗಿ ಆರೋಪಿಸಿದರು. ನೈಜ ಭಾರತೀಯರನ್ನು ಅನುಮಾನಾಸ್ಪದವಾಗಿ ಕಾಣುವುದು ಹಾಗೂ ಅವರನ್ನು ನಾಗರಿಕತ್ವದ ಅಗ್ನಿಪರೀಕ್ಷೆಗೆ ಒಳಪಡಿಸುವುದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.ದೇಶದಲ್ಲಿ ಅಕ್ರಮ ವಲಸಿಗರ ಸಮಸ್ಯೆ ಇದ್ದಲ್ಲಿ, ಅದನ್ನು ಪತ್ತೆಹಚ್ಚಲು ಮತ್ತು ತಡೆಯಲು ಸರ್ಕಾರ ಪ್ರತ್ಯೇಕ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಎಲ್ಲಾ ಭಾರತೀಯರ ಮೇಲೂ ಸಂಶಯದ ನೆರಳು ಬೀರಿ ನಾಗರಿಕತ್ವ ಸಾಬೀತುಪಡಿಸುವಂತೆ ಒತ್ತಾಯಿಸುವುದು ಅಸಂಗತ ಮತ್ತು ಅನ್ಯಾಯಕರ ಕ್ರಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಎಸ್ಐಆರ್ ಪ್ರಕ್ರಿಯೆಯ ಕುರಿತು SDPI ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ವಿವರವಾದ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಲಾಹುದ್ದೀನ್ ವಹಿಸಿದ್ದರು. ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಸಾದಾತ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅತಿಖ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿವಿಧ ಸಂಘ–ಸಂಸ್ಥೆಗಳ ಮುಖಂಡರು, ಮಹಿಳೆಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜನಜಾಗೃತಿ ಸಂದೇಶವನ್ನು ಬಲಪಡಿಸಿದರು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ನಗರದಲ್ಲಿ Social Democratic Party of India (SDPI) ವತಿಯಿಂದ “ಎಸ್ಐಆರ್ ಭಯ ಬೇಡ, ಜಾಗೃತಿ ಇರಲಿ” ಎಂಬ ಘೋಷಣೆಯಡಿ ಜನಜಾಗೃತಿ ಸಭೆ ಯಶಸ್ವಿಯಾಗಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಒಕ್ಕೂಟ ಬಿಜೆಪಿ ಸರ್ಕಾರವು ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್ಐಆರ್ ಪ್ರಕ್ರಿಯೆಯ ಮೂಲಕ ಭಾರತೀಯರ ನಾಗರಿಕತ್ವವನ್ನು ಪ್ರಶ್ನಿಸುವ ದುರಾಲೋಚನೆಗೆ ಮುಂದಾಗಿದೆ ಎಂದು ತೀವ್ರವಾಗಿ ಆರೋಪಿಸಿದರು. ನೈಜ ಭಾರತೀಯರನ್ನು ಅನುಮಾನಾಸ್ಪದವಾಗಿ ಕಾಣುವುದು ಹಾಗೂ ಅವರನ್ನು ನಾಗರಿಕತ್ವದ ಅಗ್ನಿಪರೀಕ್ಷೆಗೆ ಒಳಪಡಿಸುವುದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.ದೇಶದಲ್ಲಿ ಅಕ್ರಮ ವಲಸಿಗರ ಸಮಸ್ಯೆ ಇದ್ದಲ್ಲಿ, ಅದನ್ನು ಪತ್ತೆಹಚ್ಚಲು ಮತ್ತು ತಡೆಯಲು ಸರ್ಕಾರ ಪ್ರತ್ಯೇಕ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಎಲ್ಲಾ ಭಾರತೀಯರ ಮೇಲೂ ಸಂಶಯದ ನೆರಳು ಬೀರಿ ನಾಗರಿಕತ್ವ ಸಾಬೀತುಪಡಿಸುವಂತೆ ಒತ್ತಾಯಿಸುವುದು ಅಸಂಗತ ಮತ್ತು ಅನ್ಯಾಯಕರ ಕ್ರಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಎಸ್ಐಆರ್ ಪ್ರಕ್ರಿಯೆಯ ಕುರಿತು SDPI ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ವಿವರವಾದ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಲಾಹುದ್ದೀನ್ ವಹಿಸಿದ್ದರು. ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಸಾದಾತ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅತಿಖ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿವಿಧ ಸಂಘ–ಸಂಸ್ಥೆಗಳ ಮುಖಂಡರು, ಮಹಿಳೆಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜನಜಾಗೃತಿ ಸಂದೇಶವನ್ನು ಬಲಪಡಿಸಿದರು.