Categories: featureNewsPolitics

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ನಗರದಲ್ಲಿ Social Democratic Party of India (SDPI) ವತಿಯಿಂದ “ಎಸ್‌ಐಆರ್ ಭಯ ಬೇಡ, ಜಾಗೃತಿ ಇರಲಿ” ಎಂಬ ಘೋಷಣೆಯಡಿ ಜನಜಾಗೃತಿ ಸಭೆ ಯಶಸ್ವಿಯಾಗಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಒಕ್ಕೂಟ ಬಿಜೆಪಿ ಸರ್ಕಾರವು ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಭಾರತೀಯರ ನಾಗರಿಕತ್ವವನ್ನು ಪ್ರಶ್ನಿಸುವ ದುರಾಲೋಚನೆಗೆ ಮುಂದಾಗಿದೆ ಎಂದು ತೀವ್ರವಾಗಿ ಆರೋಪಿಸಿದರು. ನೈಜ ಭಾರತೀಯರನ್ನು ಅನುಮಾನಾಸ್ಪದವಾಗಿ ಕಾಣುವುದು ಹಾಗೂ ಅವರನ್ನು ನಾಗರಿಕತ್ವದ ಅಗ್ನಿಪರೀಕ್ಷೆಗೆ ಒಳಪಡಿಸುವುದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.ದೇಶದಲ್ಲಿ ಅಕ್ರಮ ವಲಸಿಗರ ಸಮಸ್ಯೆ ಇದ್ದಲ್ಲಿ, ಅದನ್ನು ಪತ್ತೆಹಚ್ಚಲು ಮತ್ತು ತಡೆಯಲು ಸರ್ಕಾರ ಪ್ರತ್ಯೇಕ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಎಲ್ಲಾ ಭಾರತೀಯರ ಮೇಲೂ ಸಂಶಯದ ನೆರಳು ಬೀರಿ ನಾಗರಿಕತ್ವ ಸಾಬೀತುಪಡಿಸುವಂತೆ ಒತ್ತಾಯಿಸುವುದು ಅಸಂಗತ ಮತ್ತು ಅನ್ಯಾಯಕರ ಕ್ರಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಎಸ್‌ಐಆರ್ ಪ್ರಕ್ರಿಯೆಯ ಕುರಿತು SDPI ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ವಿವರವಾದ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಲಾಹುದ್ದೀನ್ ವಹಿಸಿದ್ದರು. ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಸಾದಾತ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅತಿಖ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿವಿಧ ಸಂಘ–ಸಂಸ್ಥೆಗಳ ಮುಖಂಡರು, ಮಹಿಳೆಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜನಜಾಗೃತಿ ಸಂದೇಶವನ್ನು ಬಲಪಡಿಸಿದರು.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

4 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago