ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಆರ್ಥಿಕ ಪರಿಣಾಮಗಳಿಂದ ದೇಶದ ಆತಿಥ್ಯ ವಲಯವನ್ನು ರಕ್ಷಿಸಲು ಮೋದಿ ಸರ್ಕಾರ ವಿಫಲವಾಗಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ. ಈ ಪರಿಸ್ಥಿತಿಯ ಪರಿಣಾಮವಾಗಿ ರೆಸ್ಟೋರೆಂಟ್‌ಗಳು, ಸಣ್ಣ ಉಪಾಹಾರ ಗೃಹಗಳು ಮತ್ತು ಹೋಟೆಲ್‌ಗಳು ಅಪೂರ್ವ ಸಂಕಷ್ಟವನ್ನು ಎದುರಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ದೇಶದಾದ್ಯಂತ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಹೆಚ್ಚುತ್ತಿರುವುದರಿಂದ ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾ ಸೇರಿದಂತೆ ಪ್ರಮುಖ ನಗರಗಳಲ್ಲಿ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಕೈಗಾರಿಕಾ ವಲಯಗಳು ಗಂಭೀರವಾಗಿ ಬಾಧಿತರಾಗುತ್ತಿವೆ. ಈ ಪರಿಸ್ಥಿತಿ ಮುಂದುವರೆದರೆ ಸಂಪೂರ್ಣ ಕಾರ್ಮಿಕ ವರ್ಗವೇ ತೀವ್ರ ಸಂಕಷ್ಟ ಮತ್ತು ಕಷ್ಟಗಳಿಗೆ ತಳ್ಳಲ್ಪಡುವ ಸಾಧ್ಯತೆ ಇದೆ.

ಫಾರೂಖಿ ಅವರು ಸರ್ಕಾರದ ಪ್ರತಿಕ್ರಿಯೆ ತುರ್ತು ಮತ್ತು ಸರಿಯಾದ ಯೋಜನೆಯಿಲ್ಲದೆ ನಡೆಯುತ್ತಿದೆ ಎಂದು ಟೀಕಿಸಿದ್ದು, ಗೃಹ ಬಳಕೆಯ ಎಲ್‌ಪಿಜಿ ವಿತರಣೆಗೂ ಸರ್ಕಾರ ಆದ್ಯತೆ ನೀಡಿದರೂ, ವಾಣಿಜ್ಯ ಬಳಕೆದಾರರಿಗಾಗಿ ಸ್ಪಷ್ಟ ತುರ್ತು ಕಾರ್ಯಯೋಜನೆಯ ಕೊರತೆಯಿಂದ ಸಾವಿರಾರು ಸಣ್ಣ ಮತ್ತು ಮಧ್ಯಮ ಮಟ್ಟದ ಉಪಾಹಾರ ಗೃಹಗಳು ಬದುಕು ಉಳಿಸಿಕೊಳ್ಳಲು ಹೋರಾಡುತ್ತಿರುವ ಪರಿಸ್ಥಿತಿ ಉಂಟಾಗಿದೆ, ಆಡಳಿತದ ಮೂರ್ಖ ಮತ್ತು ಅನೈತಿಕ ವಿದೇಶಾಂಗ ನೀತಿಗಳು ದೇಶಕ್ಕೆ ಭಾರೀ ಹಾನಿಯನ್ನು ಉಂಟುಮಾಡುತ್ತಿರುವುದು ಗಂಭೀರ ಚಿಂತೆಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತಕ್ಷಣವೇ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಪುನಃಸ್ಥಾಪಿಸಲು, ಇಂಧನ ಆಮದು ಮೂಲಗಳನ್ನು ವಿಭಿನ್ನಗೊಳಿಸಲು ಹಾಗೂ ಬದುಕು ಸಂಕಷ್ಟದಲ್ಲಿರುವ ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕರನ್ನು ರಕ್ಷಿಸಲು ತುರ್ತು ನೆರವು ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದೆ.

SDPIKarnataka #GasCylinder #IranWar

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago