Categories: featureNewsPolitics

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ನೋಟಿಸ್‌ ಕಿತ್ತೆಸೆದು ಹಾಗೂ ಸರ್ಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುವುದು ಯಾವುದೇ ಜನಪ್ರತಿನಿಧಿಗೆ ಶೋಭೆ ತರುವ ನಡೆ ಅಲ್ಲ.

ಈ ಹಿನ್ನೆಲೆಯಲ್ಲಿ, ಮಾನ್ಯ ಚಿಕ್ಕಮಗಳೂರಿನ ಎಸ್ಪಿ ಅವರೇ, ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪದಡಿ ಶಾಸಕ ಸಿ.ಟಿ. ರವಿ ಹಾಗೂ ಈ ಕೃತ್ಯದಲ್ಲಿ ಭಾಗಿಯಾಗಿರುವ ಅವರ ಬೆಂಬಲಿಗರ ವಿರುದ್ಧ ಕಾನೂನಿನ ಪ್ರಕಾರ ಸುಮೋಟೋ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ.

ಪ್ರಜಾಪ್ರಭುತ್ವದಲ್ಲಿ ಕಾನೂನಿನ ಗೌರವ ಎಲ್ಲರಿಗೂ ಒಂದೇ ಆಗಿರಬೇಕು. ಕಾನೂನು ಸಾಮಾನ್ಯ ನಾಗರಿಕರಿಗೆ ಒಂದು ರೀತಿಯಲ್ಲಿ,ಜನಪ್ರತಿನಿಧಿಗಳಿಗೆ ಮತ್ತೊಂದು ರೀತಿಯಲ್ಲಿ ಅನ್ವಯಿಸಬಾರದು, ಈ ಬಗ್ಗೆ ಕರ್ನಾಟಕದ ಡಿಜಿಪಿ ಅವರೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ.

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka

admin

Recent Posts

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

5 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago