KannadaPressReleases

ಪತ್ರಿಕಾ ಪ್ರಕಟಣೆ<br>ದಿನಾಂಕ: 06,ಆಗಸ್ಟ್ 2025<br><br>*ಸಾರಿಗೆ ನೌಕರರ ಬೇಡಿಕೆಗಳನ್ನು ಸರಕಾರ ತಕ್ಷಣ ಈಡೇರಿಸಬೇಕು – ಎಸ್‌ಡಿಪಿಐ*<br><br>ಸಾರಿಗೆ ಇಲಾಖೆಯ ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರಕಾರ ತಕ್ಷಣ ಈಡೇರಿಸುವಂತೆ *ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್* ಪತ್ರಿಕಾ ಪ್ರಕಟಣೆಯಲ್ಲಿ  ಆಗ್ರಹಿಸಿದ್ದಾರೆ.<br><br>ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು<br>ರಾಜ್ಯದಾದ್ಯಂತ ಸಾರಿಗೆ ನೌಕರರ ಆಂದೋಲನದಿಂದಾಗಿ ಸಾವಿರಾರು ಪ್ರಯಾಣಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಸಾಮಾನ್ಯ ಜನರ ದಿನನಿತ್ಯದ ಸಂಚಾರ ಅಸ್ತವ್ಯಸ್ತವಾಗಿದ್ದು, ವಿದ್ಯಾರ್ಥಿಗಳು, ಉದ್ಯೋಗಿಗಳು, ಆಸ್ಪತ್ರೆಗಳಿಗೆ ತೆರಳುವವರು ಸೇರಿದಂತೆ ಎಲ್ಲಾ ವರ್ಗದ ಜನರು ಮುಷ್ಕರದ ಪರಿಣಾಮ ಎದುರಿಸುತ್ತಿದ್ದಾರೆ.<br><br>ಸಾರಿಗೆ ನೌಕರರ ಬೇಡಿಕೆಗಳು ದೀರ್ಘಕಾಲದಿಂದ ಬಾಕಿ ಉಳಿದಿವೆ. ಅವರ ಹಕ್ಕು, ಭದ್ರತೆ ಹಾಗೂ ವೇತನ ಸಂಬಂಧಿತ ಸಮಸ್ಯೆಗಳ ಬಗ್ಗೆ ಸರಕಾರ ನಿರ್ಲಕ್ಷ್ಯ ತೋರುತ್ತಿರುವುದು ವಿಷಾದನೀಯ. ಜನತೆಗೆ ತೊಂದರೆ ಉಂಟಾಗದಂತೆ ಸರಕಾರ ತಕ್ಷಣ ಕ್ರಮ ಕೈಗೊಂಡು ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿದ್ದಾರೆ.<br><br> ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಸಾರ್ವಜನಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದುದರಿಂದ ಸರಕಾರವು ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಸೂಕ್ತ ಸಂವಾದ ನಡೆಸಿ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಬೇಕು ಮತ್ತು ಅವರ ಬೇಡಿಕೆಗಳನ್ನು ಅರ್ಥಮಾಡಿಕೊಂಡು ಸಮನ್ವಯ ಸಾಧಿಸುವುದು ಆಡಳಿತ ಪಕ್ಷದ ಕರ್ತವ್ಯವಾಗಿದೆ ಎಂದು *ಬಿ. ಆರ್. ಭಾಸ್ಕರ್ ಪ್ರಸಾದ್* ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

7 months ago

ಪತ್ರಿಕಾ ಪ್ರಕಟಣೆ<br><br>*ಸ್ಥಳೀಯ ಸಂಸ್ಥೆಗಳ ಆಡಳಿತವು ಪ್ರಜಾಪ್ರಭುತ್ವದ ಅಡಿಪಾಯ: ಆಯ್ಕೆಯಾದ ಪ್ರತಿನಿಧಿಗಳು ಕಾರ್ಯಕ್ಷಮತೆಯ ಮೂಲಕ ಪಕ್ಷವನ್ನು ‘Emerging to Power’ ದಿಕ್ಕಿಗೆ ಮುನ್ನಡೆಸಬೇಕು” – ಅಫ್ಸರ್ ಕೊಡ್ಲಿಪೇಟೆ* <br><br>*ಕಲ್ಯಾಣ ಕರ್ನಾಟಕ ಭಾಗದ ಎಸ್‌ಡಿಪಿಐ ಜನಪ್ರತಿನಿಧಿಗಳ ಸಭೆ*<br><br>*ಗುಲ್ಬರ್ಗ : 4 ಆಗಷ್ಟ್ 2025 –* <br><br>ಸ್ಥಳೀಯ ಸಂಸ್ಥೆಗಳ ಆಡಳಿತವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ ಎಂಬ ಘೋಷಣೆಯೊಂದಿಗೆ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ವ್ಯಾಪ್ತಿಯ ಎಸ್‌ಡಿಪಿಐ ಪಕ್ಷದ ಚುನಾಯಿತ ಜನಪ್ರತಿನಿಧಿಗಳ ಮೇಲುಸ್ತುವಾರಿಗಳ (ERM) ವಿಶೇಷ ಸಭೆ, ರಾಜ್ಯ ಪ್ರದಾನ ಕಾರ್ಯದರ್ಶಿ ಮತ್ತು ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ERM ಉಸ್ತುವಾರಿ ಅಬ್ರಾರ್ ಅಹ್ಮದ್ ರವರ ನೇತೃತ್ವದಲ್ಲಿ ಗುಲ್ಬರ್ಗ ನಗರದಲ್ಲಿ ಜರುಗಿತು.<br><br>ಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅಫ್ಸರ್ ಕೊಡ್ಲಿಪೇಟೆ ಅವರು, “ಪಕ್ಷದ ರಾಜಕೀಯ ಶಕ್ತಿ ಹಾಗೂ ಸಾರ್ವಜನಿಕ ಪ್ರಭಾವವನ್ನು ವಿಸ್ತರಿಸಲು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಮುಖವಾಗಿವೆ. ಈ ಹಿನ್ನಲೆಯಲ್ಲಿ, ಪಕ್ಷದ ಪರವಾಗಿ ಆಯ್ಕೆಯಾದ ಪ್ರತಿನಿಧಿಗಳು ರಾಜಕೀಯ ಬದ್ಧತೆ, ನೈತಿಕತೆ ಮತ್ತು ಕಾರ್ಯಕ್ಷಮತೆಯ ಮೂಲಕ ಪಕ್ಷವನ್ನು ‘Emerging to Power’ ದಿಕ್ಕಿಗೆ ಮುನ್ನಡೆಸುವಲ್ಲಿ ಪ್ರಮುಖ ಪಾತ್ರವಹಿಸಬೇಕಾಗಿದೆ,” ಎಂದು ಸೂಚಿಸಿದರು.<br><br>ಅಬ್ರಾರ್ ಅಹ್ಮದ್ ಮಾತನಾಡುತ್ತಾ, “ಪಕ್ಷದ ಪರವಾಗಿ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ನಿರಂತರ ತರಬೇತಿಗಳಲ್ಲಿ ಭಾಗವಹಿಸಿ ಉತ್ತಮ ಆಡಳಿತದ ಮಾದರಿಯನ್ನು ನೀಡಬೇಕು,” ಎಂದು ಸಲಹೆ ನೀಡಿದರು.<br><br>ಸಭೆಯಲ್ಲಿ ಪಾಲ್ಗೊಂಡ ಶಹಾಪುರ ನಗರಸಭಾ ಸದಸ್ಯೆ ಫಿರ್ದೋಸ್ ಖಾತೂನ್, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು ಬಳ್ಳಾರಿ ಮತ್ತು ಬೀಜಾಪುರ ಜಿಲ್ಲೆಗಳ ವಿವಿಧ ಪಂಚಾಯಿತಿಗಳ ಸದಸ್ಯರು ಮತ್ತು ಚುನಾಯಿತ ಪ್ರತಿನಿಧಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತ, ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು, ಸರಕಾರದ ಯೋಜನೆಗಳ ಅನುಷ್ಠಾನ ಹಾಗೂ ಜನರ ವಿಶ್ವಾಸ ಗಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.<br><br>ಈ ಸಭೆ, ಪಕ್ಷದ ಜನಪರ ರಾಜಕೀಯ ಭದ್ರತೆಗಾಗಿ ದಿಕ್ಕು ತೋರಿದ ಹೆಜ್ಜೆಯಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗೆ ಬುನಾದಿ ಕಲ್ಪಿಸಿದೆ.<br><br>ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್, ಗುಲ್ಬರ್ಗ ಜಿಲ್ಲಾಧ್ಯಕ್ಷರಾದ ಮೊಹಮ್ಮದ್ ಮೋಹಿಸಿನ್, ಯಾದಗಿರಿ ಜಿಲ್ಲಾಧ್ಯಕ್ಷರಾದ ಇಸಾಖ್  ಹುಸೇನ್, ಗುಲ್ಬರ್ಗ ಜಿಲ್ಲಾ ಕಾರ್ಯದರ್ಶಿ ಹಾಗೂ ERM ಉಸ್ತುವಾರಿ ಶಕೀಲ್ ಪಟೇಲ್ ಹಾಜರಿದ್ದರು.

7 months ago

ಗಾಜಾದಲ್ಲಿ ನರಮೇಧ ಮತ್ತು ಹಸಿವಿನಿಂದ ಆಗುತ್ತಿರುವ ಸಾವುಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಒತ್ತಾಯ

ಗಾಜಾದಲ್ಲಿ ತೀವ್ರ ಹಸಿವಿನಿಂದ 85 ಮಕ್ಕಳೂ ಸೇರಿ 127 ಅಮಾಯಕ ಪ್ಯಾಲೆಸ್ಟೈನಿಯನ್ನರ ಸಾವಿನ ಬಗ್ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ…

7 months ago

ಭೂ ಸ್ವಾಧೀನ ವಿರೋಧಿ ಹೋರಾಟ ಅಂತಿಮವಾಗಿ ಗೆದ್ದಿದೆ

ದೇವನಹಳ್ಳಿ ರೈತರ ವಿಜಯವನ್ನು ಎಸ್.ಡಿ.ಪಿ.ಐ ಸ್ವಾಗತಿಸುತ್ತದೆ ಬೆಂಗಳೂರು 15-07-2025 : ರೈತರ ಹೋರಾಟಕ್ಕೆ ಸ್ಪಂದಿಸಿ, ಬೂಸ್ವಾಧೀನ ಕೈ ಬಿಟ್ಟ ಸಿದ್ದರಾಮಯ್ಯ ಸರ್ಕಾರದ ನಿರ್ಧಾರ ಸ್ವಾಗತರ್ಹ SDPI. ದೇವನಹಳ್ಳಿ…

7 months ago

ಪತ್ರಿಕಾ ಪ್ರಕಟಣೆ<br><br>ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಕೊಪ್ಪಳ ಜಿಲ್ಲಾ ಮತ್ತು ವಿಧಾನಸಭಾ ನಾಯಕರ ವಿಶೇಷ ಸಭೆ*<br><br>ಗಂಗಾವತಿ:ಜುಲೈ 8:<br> ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರ ಸಮ್ಮುಖದಲ್ಲಿ ನಡೆಯಿತು. <br><br>ಜಿಲ್ಲಾ, ವಿಧಾನಸಭಾ ಮತ್ತು ವಿವಿಧ ಹಂತದ ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ನಾಯಕರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳ ಪೂರ್ವ ತಯಾರಿಗಳ ಬಗ್ಗೆ, ವಾರ್ಡ್ ಹಾಗೂ ಬೂತ್ ಮಟ್ಟದ ಸಂಘಟನಾ ಸ್ಥಿತಿಗತಿಯ ಕುರಿತು ವಿಶ್ಲೇಷಣೆ, ಕಾರ್ಯತಂತ್ರಗಳ ವಿವಿಧ ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. <br><br>ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, “ಪ್ರತಿಯೊಬ್ಬನೂ ಚುನಾವಣಾ ಕಾರ್ಯಗಳತ್ತ ಹೆಚ್ಚು ಕಾಳಜಿಯಿಂದ ನಿರತರಾಗಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ನಮ್ಮ ಮೇಲೆ ಇರುವ ಪ್ರಮುಖ ಜವಾಬ್ದಾರಿ. ಸ್ಥಳೀಯ ಸಂಸ್ಥೆ ಚುನಾವಣೆಯ ವಿಳಂಬವು ಮತ್ತು ಸರ್ಕಾರದ ನಿರ್ಲಕ್ಷ್ಯವೂ ಪ್ರಜಾಪ್ರಭುತ್ವದ ಅಪಮಾನ” ಎಂದು ಅಭಿಪ್ರಾಯಪಟ್ಟರು .<br> ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, “ಪಕ್ಷವನ್ನು ಬೂತ್ ಮಟ್ಟದ ಬಲಗೊಳಿಸುವುದು ಅವಶ್ಯಕ. ಪ್ರತಿಯೊಬ್ಬ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷವಾಕ್ಯದಡಿಯಲ್ಲಿ ತಕ್ಕ ರೀತಿಯಲ್ಲಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.<br><br>ಸಭೆಯ ಅಂತಿಮ ಭಾಗದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ಕಾರ್ಯತಂತ್ರ, ಯೋಜಿತ ಚಟುವಟಿಕೆಗಳ ಬಗ್ಗೆ ಆಳವಾದ ಚರ್ಚೆ ನಡೆಸಿ, ಮುಂದಿನ ಹಂತದ ಕಾರ್ಯತೀರ್ಮಾನಗಳನ್ನು ಕೈಗೊಳ್ಳಲಾಯಿತು. <br>ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸೈಯದ್ ಶಾಕೀಬ್, ಜಿಲ್ಲಾ ಕಾರ್ಯದರ್ಶಿ ಚಾಂದ್, ಜಿಲ್ಲಾ ಕೋಶಾಧಿಕಾರಿ ಮಹೇಬೂಬ್ ರಜಾ, ಗಂಗಾವತಿ ವಿಧಾನ ಸಭಾ ಅಧ್ಯಕ್ಷರು ಇರ್ಫಾನ್, ಕೊಪ್ಪಳ ವಿಧಾನಸಭಾ ಅಧ್ಯಕ್ಷರು ಸಲೀಮ್ ಖಾದ್ರಿ, ಕನಕಗಿರಿ ವಿಧಾನಸಭಾ ಅಧ್ಯಕ್ಷರು ಅಜ್ಮಿರ್ ಸಿಂಗನಾಳ್,ಕುಷ್ಟಗಿ ವಿಧಾನಸಭಾ ಉಪಾಧ್ಯಕ್ಷರು ಸಲೀಮ್ ಕೆ ಬಿ, ಸಿಂದನೂರ್ ವಿಧಾನಸಭಾ ಅಧ್ಯಕ್ಷರು ಆಸೀಫ್ ಕೆ, ಕಂಪ್ಲಿ ವಿಧಾನಸಭಾ ಅಧ್ಯಕ್ಷರು ಇಮ್ರಾನ್<br> ಉಪಸ್ಥಿತರಿದ್ದರು.

8 months ago

SDPI ರಾಜ್ಯ ನಾಯಕರು ಗದಗ ಜಿಲ್ಲೆಗೆ ಭೇಟಿ: ರಾಜಕೀಯ ಬದ್ಧತೆ, ಪರಸ್ಪರ ಗೌರವ ಮತ್ತು ಭವಿಷ್ಯದ ಸಹಯೋಗದ ಚರ್ಚೆ

ಗದಗ, 26 ಜೂನ್ 2025: ಎಸ್‌ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಅಪ್ಪರ್ ಕೆ.ಆರ್.ನಗರ…

8 months ago

ಪತ್ರಿಕಾ ಪ್ರಕಟಣೆ

ದುಂಡು ಮೇಜಿನ ಸಭೆ: ಜನಗಣತಿ ಮತ್ತು ಸಮೀಕ್ಷೆ ಕುರಿತ ಗೊಂದಲ ನಿವಾರಣೆಗೆ ಸಜ್ಜಾದ SDPI ಬೆಂಗಳೂರು, ದಿನಾಂಕ: ಜೂನ್ 16: ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ…

8 months ago

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸೈಯದ್ ದಸ್ತಗೀರ್…

1 year ago

ತೀರ್ಥಹಳ್ಳಿ ಸರ್ಕಾರಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಗವದ್ಗೀತೆ ಹಂಚಿಕೆ ಮತ್ತು ಅತಿಥಿಯಾಗಿದ್ದ ನ್ಯಾಯಾಧೀಶರಿಂದಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಭಗವದ್ಗೀತೆ ಸಂವಿಧಾನಕ್ಕೆ ಸಮ ಎಂದಿದ್ದು ಸಂವಿಧಾನ ವಿರೋಧಿ ನಡವಳಿಕೆ: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್…

2 years ago

ಬಾಬರಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ವಿರುದ್ಧ ಏಕಿಷ್ಟು ದ್ವೇಷ? ಯಾರನ್ನು ಮೆಚ್ಚಿಸಲು ಇಷ್ಟೊಂದು ಪ್ರಕರಣ, ಬಂಧನಗಳು?: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ?…

2 years ago