26
Jan

ಭಾರತದ ಗಣರಾಜ್ಯೋತ್ಸವದ ಈ ಹೆಮ್ಮೆಯ ದಿನದಂದು, ನಾಡಿನ ಎಲ್ಲಾ ನಾಗರಿಕರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ಈ ದಿನವು ನಮ್ಮ ಸಂವಿಧಾನದ ಮೂಲ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ಸ್ಮರಿಸುವ ದಿನವಾಗಿದೆ. ಪ್ರಜಾಪ್ರಭುತ್ವವನ್ನು ಬಲಪಡಿಸುವುದು, ಸಂವಿಧಾನಾತ್ಮಕ ಹಕ್ಕುಗಳನ್ನು ರಕ್ಷಿಸುವುದು ಹಾಗೂ ನ್ಯಾಯಯುತ ಮತ್ತು ಸಮಾನತೆಯ ಭಾರತ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಈ ಗಣರಾಜ್ಯೋತ್ಸವವು ಎಲ್ಲರಿಗೂ ಹೊಸಸಂಕಲ್ಪ, ಹೊಸ ಶಕ್ತಿ ಮತ್ತು ದೇಶಸೇವೆಯ ಉತ್ಸಾಹವನ್ನು ನೀಡಲಿ ಎಂದು ಹಾರೈಸುತ್ತೇನೆ. ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ~ದೇವನೂರು ಪುಟ್ಟನಂಜಯ್ಯ,ರಾಜ್ಯ ಉಪಾಧ್ಯಕ್ಷರು SDPIKarnataka #RepublicDay2026

25
Jan

ಪ್ರಿಯ ಸ್ನೇಹಿತರೇ, ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ, ನಮ್ಮ ಭಾರತದ ಸಂವಿಧಾನದ ಮೌಲ್ಯಗಳನ್ನು ಸ್ಮರಿಸುತ್ತಾ, ನಾವು ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಆಶಯಗಳನ್ನು ಎತ್ತಿ ಹಿಡಿಯುವ ಗಣರಾಜ್ಯದ ಕನಸನ್ನು ನನಸಾಗಿಸಬೇಕಿದೆ . ಆದರೆ, ಇತ್ತೀಚಿನ ಕಾಲದಲ್ಲಿ ಸಂವಿಧಾನ ವಿರೋಧಿ ಕರಾಳ ಕಾನೂನುಗಳು, NIA ಮತ್ತು ED ಸಂಸ್ಥೆಗಳ ದುರುಪಯೋಗ, ಸರ್ಕಾರವನ್ನು ಪ್ರಶ್ನಿಸುವವರ ಮೇಲೆ UAPA ಹೇರಿ ಅಕ್ರಮ ಬಂಧನಗಳ ಮೂಲಕ ಧ್ವನಿ ಎತ್ತುವವರನ್ನು ಮೌನವಾಗಿಸುವ ಆಳುವವರ ಷಡ್ಯಂತ್ರಗಳು ನಮ್ಮ ಸಂವಿಧಾನದ ಆತ್ಮವನ್ನೇ ದುರ್ಬಲಗೊಳಿಸುತ್ತಿವೆ.

ಈ ಎಲ್ಲಾ ಸವಾಲುಗಳ ನಡುವೆಯೂ, ನಮ್ಮ ಸಂವಿಧಾನದ ಮೌಲ್ಯಗಳು ಸಂರಕ್ಷಣೆಗೊಳ್ಳಲು ಒಗ್ಗಟ್ಟಿನ ಹೋರಾಟದ ಅಗತ್ಯವಿದೆ, ಪ್ರಜಾಪ್ರಭುತ್ವದ ಆಧಾರಸ್ತಂಭಗಳು ದೃಢವಾಗಲಿ, ಮತ್ತು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕುಗಳು ರಕ್ಷಣೆಯಾಗಲಿ ಎಂಬ ಆಶಯದೊಂದಿಗೆ, ನಿಮಗೆಲ್ಲರಿಗೂ ಹೃದಯಪೂರ್ವಕ

25
Jan
23
Jan

ಅಭಿನಂದನೆಗಳು

ಕರ್ನಾಟಕದಿಂದ ಆಯ್ಕೆಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು SDPI 6th NATIONAL REPRESENTATIVE COUNCIL-2026 JAN 20, 21 MANGALORE ಮುಹಮ್ಮದ್ ಅಶ್ರಫ್ ಅಂಕಜಾಲ್ ರಿಯಾಝ್ ಫರಂಗಿಪೇಟೆ ಮುಹಮ್ಮದ್ ಇಲ್ಯಾಸ್ ತುಂಬೆ ಅಲ್ಫೋನ್ಸ್ ಫ್ರಾಂಕೋ