ಪತ್ರಿಕಾ ಪ್ರಕಟಣೆ<br><br>*ಸ್ಥಳೀಯ ಸಂಸ್ಥೆಗಳ ಆಡಳಿತವು ಪ್ರಜಾಪ್ರಭುತ್ವದ ಅಡಿಪಾಯ: ಆಯ್ಕೆಯಾದ ಪ್ರತಿನಿಧಿಗಳು ಕಾರ್ಯಕ್ಷಮತೆಯ ಮೂಲಕ ಪಕ್ಷವನ್ನು ‘Emerging to Power’ ದಿಕ್ಕಿಗೆ ಮುನ್ನಡೆಸಬೇಕು” – ಅಫ್ಸರ್ ಕೊಡ್ಲಿಪೇಟೆ* <br><br>*ಕಲ್ಯಾಣ ಕರ್ನಾಟಕ ಭಾಗದ ಎಸ್‌ಡಿಪಿಐ ಜನಪ್ರತಿನಿಧಿಗಳ ಸಭೆ*<br><br>*ಗುಲ್ಬರ್ಗ : 4 ಆಗಷ್ಟ್ 2025 –* <br><br>ಸ್ಥಳೀಯ ಸಂಸ್ಥೆಗಳ ಆಡಳಿತವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ ಎಂಬ ಘೋಷಣೆಯೊಂದಿಗೆ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ವ್ಯಾಪ್ತಿಯ ಎಸ್‌ಡಿಪಿಐ ಪಕ್ಷದ ಚುನಾಯಿತ ಜನಪ್ರತಿನಿಧಿಗಳ ಮೇಲುಸ್ತುವಾರಿಗಳ (ERM) ವಿಶೇಷ ಸಭೆ, ರಾಜ್ಯ ಪ್ರದಾನ ಕಾರ್ಯದರ್ಶಿ ಮತ್ತು ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ERM ಉಸ್ತುವಾರಿ ಅಬ್ರಾರ್ ಅಹ್ಮದ್ ರವರ ನೇತೃತ್ವದಲ್ಲಿ ಗುಲ್ಬರ್ಗ ನಗರದಲ್ಲಿ ಜರುಗಿತು.<br><br>ಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅಫ್ಸರ್ ಕೊಡ್ಲಿಪೇಟೆ ಅವರು, “ಪಕ್ಷದ ರಾಜಕೀಯ ಶಕ್ತಿ ಹಾಗೂ ಸಾರ್ವಜನಿಕ ಪ್ರಭಾವವನ್ನು ವಿಸ್ತರಿಸಲು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಮುಖವಾಗಿವೆ. ಈ ಹಿನ್ನಲೆಯಲ್ಲಿ, ಪಕ್ಷದ ಪರವಾಗಿ ಆಯ್ಕೆಯಾದ ಪ್ರತಿನಿಧಿಗಳು ರಾಜಕೀಯ ಬದ್ಧತೆ, ನೈತಿಕತೆ ಮತ್ತು ಕಾರ್ಯಕ್ಷಮತೆಯ ಮೂಲಕ ಪಕ್ಷವನ್ನು ‘Emerging to Power’ ದಿಕ್ಕಿಗೆ ಮುನ್ನಡೆಸುವಲ್ಲಿ ಪ್ರಮುಖ ಪಾತ್ರವಹಿಸಬೇಕಾಗಿದೆ,” ಎಂದು ಸೂಚಿಸಿದರು.<br><br>ಅಬ್ರಾರ್ ಅಹ್ಮದ್ ಮಾತನಾಡುತ್ತಾ, “ಪಕ್ಷದ ಪರವಾಗಿ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ನಿರಂತರ ತರಬೇತಿಗಳಲ್ಲಿ ಭಾಗವಹಿಸಿ ಉತ್ತಮ ಆಡಳಿತದ ಮಾದರಿಯನ್ನು ನೀಡಬೇಕು,” ಎಂದು ಸಲಹೆ ನೀಡಿದರು.<br><br>ಸಭೆಯಲ್ಲಿ ಪಾಲ್ಗೊಂಡ ಶಹಾಪುರ ನಗರಸಭಾ ಸದಸ್ಯೆ ಫಿರ್ದೋಸ್ ಖಾತೂನ್, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು ಬಳ್ಳಾರಿ ಮತ್ತು ಬೀಜಾಪುರ ಜಿಲ್ಲೆಗಳ ವಿವಿಧ ಪಂಚಾಯಿತಿಗಳ ಸದಸ್ಯರು ಮತ್ತು ಚುನಾಯಿತ ಪ್ರತಿನಿಧಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತ, ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು, ಸರಕಾರದ ಯೋಜನೆಗಳ ಅನುಷ್ಠಾನ ಹಾಗೂ ಜನರ ವಿಶ್ವಾಸ ಗಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.<br><br>ಈ ಸಭೆ, ಪಕ್ಷದ ಜನಪರ ರಾಜಕೀಯ ಭದ್ರತೆಗಾಗಿ ದಿಕ್ಕು ತೋರಿದ ಹೆಜ್ಜೆಯಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗೆ ಬುನಾದಿ ಕಲ್ಪಿಸಿದೆ.<br><br>ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್, ಗುಲ್ಬರ್ಗ ಜಿಲ್ಲಾಧ್ಯಕ್ಷರಾದ ಮೊಹಮ್ಮದ್ ಮೋಹಿಸಿನ್, ಯಾದಗಿರಿ ಜಿಲ್ಲಾಧ್ಯಕ್ಷರಾದ ಇಸಾಖ್  ಹುಸೇನ್, ಗುಲ್ಬರ್ಗ ಜಿಲ್ಲಾ ಕಾರ್ಯದರ್ಶಿ ಹಾಗೂ ERM ಉಸ್ತುವಾರಿ ಶಕೀಲ್ ಪಟೇಲ್ ಹಾಜರಿದ್ದರು.

11 months ago

INAUGURAL SPEECH BY

11 months ago

~ABDUL MAJEEDState President SDPI Karnataka HOSPET. VIJAYANAGARA.Dist SDPIKarnataka #Vijayanagar

FLAG HOISTING BY NOOR MD

11 months ago

District President, HOSPET. VIJAYANAGARA.Dist

WELCOME SPEECH BY SADDAM KAMLAPUR

11 months ago

~General SecretaryHOSPET. VIJAYANAGARA.Dist SDPIKarnataka #Vijayanagar

SDPI ki State Working Committee meeting Bengaluru mein munaqid hui, Jis mein tamam office bearers aur senior leaders ne shirkat ki.

11 months ago

Meeting ko State President Abdul Majeed aur State General Secretary Mujahid Pashane chair kiya. National General Secretary Ilyas Mohammed Thumbe…

ಗಾಜಾದಲ್ಲಿ ನರಮೇಧ ಮತ್ತು ಹಸಿವಿನಿಂದ ಆಗುತ್ತಿರುವ ಸಾವುಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಒತ್ತಾಯ

11 months ago

ಗಾಜಾದಲ್ಲಿ ತೀವ್ರ ಹಸಿವಿನಿಂದ 85 ಮಕ್ಕಳೂ ಸೇರಿ 127 ಅಮಾಯಕ ಪ್ಯಾಲೆಸ್ಟೈನಿಯನ್ನರ ಸಾವಿನ ಬಗ್ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ…

ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು ವಿಚಾರ ಸಂಕಿರಣ ಎಸ್‌ಡಿಪಿಐ ಕೇವಲ ರಾಜಕೀಯ ಆಯ್ಕೆಯಾಗಿ ಅಲ್ಲ ಅದು ತಾರತಮ್ಯವಿಲ್ಲದ, ಸಮಸಮಾಜ ನಿರ್ಮಾಣದ ದೃಢ ಸಂಕಲ್ಪದ ಚಳುವಳಿಯಾಗಿದೆ: ಅಪ್ಸರ್ ಕೊಡ್ಲಿಪೇಟೆ

11 months ago

ಕುಂದಾಪುರ, ಜುಲೈ 27: ಉಡುಪಿ ಜಿಲ್ಲೆಯ ಕುಂದಾಪುರದ ಶರೋನ್ ಹೋಟೆಲ್ ಸಭಾಂಗಣದಲ್ಲಿ ''ಪ್ರಸಕ್ತ ಕಾಲಘಟ್ಟದಲ್ಲಿ ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು" ಎಂಬ ಮಹತ್ವದ ವಿಷಯದ…